![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವ
![](https://puttur.suddinews.com/wp-content/uploads/2024/02/6c9af474-d472-4fb9-81f4-5174b191e32b.jpg)
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವದ ನಡೆಯಲಿದ್ದು, ಇದರ ಆಮಂತ್ರಣವನ್ನು ಜಿಲ್ಲೆಯ ಸಂತರಿಗೆ ನೀಡಲಾಯಿತು.
![](https://puttur.suddinews.com/wp-content/uploads/2024/02/c3661ee1-dd9c-4507-9394-7ed11f06688f.jpg)
ಸುಬ್ರಹ್ಮಣ್ಯ ಸಂಪುಟ ನರಸಿಂಹಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರಿಗೆ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಅವರಿಗೆ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ನೀಡಿ ಬ್ರಹ್ಮಕಲಶೋತ್ಸವಕ್ಕೆ ಆಮಂತ್ರಿಸಲಾಯಿತು.
![](https://puttur.suddinews.com/wp-content/uploads/2024/02/3b81b619-322a-4380-80e6-edbd8cd65489.jpg)
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು , ಕಾರ್ಯಾಲಯ ಸಮಿತಿ ಸಂಚಾಲಕರಾದ ಸುರೇಶ್ ರೈ ಕೊಲ್ಯ ವಿಟ್ಲ,ಪ್ರಚಾರ ಸಮಿತಿಯ ಸಂಚಾಲಕ ಸುಧಾಕರ ರೈ ಪಾಲ್ತಾಡಿ ಹೊಸಮನೆ,ಸಹ ಸಂಚಾಲಕ ಪ್ರವೀಣ್ ಚೆನ್ನಾವರ, ಸತ್ಕಾರ ಸಮಿತಿ ಸಂಚಾಲಕ ರಾಮಣ್ಣ ರೈ ಬಾಕಿಜಾಲು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2024/02/a0cd9336-bb20-4769-95b4-59e7a19d1736.jpg)