ಮುಂಡೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು: ವ್ಯಕ್ತಿಯೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡೂರು ಗ್ರಾಮದ ಕಾಳಿಂಗಹಿತ್ಲು ಎಂಬಲ್ಲಿ ಫೆ.8ರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಮುಂಡೂರು ಗ್ರಾಮದ ಕಾಳಿಂಗಹಿತ್ಲು ನಿವಾಸಿ ರವಿಚಂದ್ರ(35 ವ) ಎಂಬವರು ಮೃತಪಟ್ಟವರು. ಅವರು ಕಳೆದ 5 ವರ್ಷಗಳಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದು, ಈ ಬಗ್ಗೆ ಪುತ್ತೂರಿನಲ್ಲಿ ನರಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ವಿಪರಿತ ಮದ್ಯ ಸೇವನೆ ಹಾಗೂ ಸರಿಯಾಗಿ ಔಷಧ ತೆಗೆದುಕೊಳ್ಳದೆ ಇದ್ದರು. ಫೆ.8ರಂದು ಸಂಜೆ ರವಿಚಂದ್ರ ಅವರು ಮನೆಯ ಒಳಗೆ ಹೋಗಿ ಬಾಗಿಲನ್ನು ಹಾಕಿ ಮನೆಯ ಕೊಠಡಿಯ ಮರದ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಮೃತರ ಪತ್ನಿ ಪರಮೇಶ್ವರಿ ಅವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here