ದರ್ಬೆತ್ತಡ್ಕ ಅಯ್ಯಪ್ಪ ಭಜನಾ ಮಂದಿರದ ಪಾಕಶಾಲೆ ನಿರ್ಮಾಣಕ್ಕೆ ಧರ್ಮಸ್ಥಳದಿಂದ ದೇಣಿಗೆ

0

ಪುತ್ತೂರು: ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಪಾಕ ಶಾಲೆಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 1 ಲಕ್ಷ ರೂಪಾಯಿ ಅನುದಾನದ ಮಂಜೂರಾತಿ ಪತ್ರವನ್ನು ಫೆ.8 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾಧಿಕಾರಿ ಶಶಿಧರ್ ಎಮ್ ರವರು ಮಂದಿರದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಜಯಂತಿ ಕೆ , ವಲಯಾಧ್ಯಕ್ಷ ಎಸ್ ಮಾಧವ ರೈ ಕುಂಬ್ರ, ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಅಯ್ಯಪ್ಪ ಮಂದಿರದ ಅಧ್ಯಕ್ಷ ವಾಸು ಮಣಿಯಾಣಿ ಕುರಿಂಜ, ಕಾರ್ಯದರ್ಶಿ ರವೀಂದ್ರ ಮಣಿಯಣಿ, ಉಪಾಧ್ಯಕ್ಷ ರಮೇಶ್ ಸುವರ್ಣ, ಭಜನಾ ಸಂಚಾಲಕ ಸುರೇಶ ಡಿ, ಶ್ರೀ ಮಣಿಕಂಠ ಕುಣಿತ ಭಜನಾ ತಂಡದ ಸಂಚಾಲಕ ಮೋಹನ್ ದೇವಗಿರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here