ವೀರಮಂಗಲ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆಮುಹೂರ್ತ

0

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.15 ಹಾಗೂ 16ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಫೆ.9ರಂದು ಗೊನೆ ಮುಹೂರ್ತ ನೆರವೇರಿತು.
ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಗೊನೆ ಕಡಿಯಲಾಯಿತು. ಉತ್ಸವ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವಾ, ವಿಶ್ವಸ್ಥ ಮಂಡಲಿ ಅಧ್ಯಕ್ಷ ಉಮೇಶ್ ಕೋಡಿಬೈಲು, ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ, ಉತ್ಸವ ಸಮಿತಿ ಸದಸ್ಯರು, ವಿಶ್ವಸ್ಥ ಮಂಡಲಿ ಸದಸ್ಯರು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here