ಯುವ ಒಕ್ಕಲಿಗ ಗೌಡರ ತಾ.ಮಟ್ಟದ ಯುವ ಕ್ರೀಡಾ ಸಂಭ್ರಮ- ಮಹಾಲಿಂಗೇಶ್ವರ ದೇವಳದಿಂದ ಕ್ರೀಡಾ ಜ್ಯೋತಿ ಪ್ರಜ್ವಲನೆ – ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟಕ್ಕೆ ಚಾಲನೆ

0

ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024ಕ್ಕೆ ಪುತ್ತೂರು‌ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಿಂದ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸುವ ಮೂಲಕ ಕ್ರೀಡಾ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ದೇವಳದ ಗರ್ಭಗುಡಿಯಿಂದ ಕ್ರೀಡಾ ಜ್ಯೋತಿಗೆ ದೀಪ ಬೆಳಗಿಸಿದರು. ದೇವಳದ ರಥ ಬೀದಿಯಲ್ಲಿ ಪ್ರಗತಿಪರ ಕೃಷಿಕೆ ಯಶೋಧಾ ಮೋನಪ್ಪ ಗೌಡ ತೆಂಕಪ್ಪಾಡಿ ಅವರ ಪರವಾಗಿ ಅವರ ಪುತ್ರ ಚಂದನ್ ಅವರು ತೆಂಗಿನ ಕಾಯಿ‌ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಇದರ ಹಕಾರದೊಂದಿಗೆ ಕ್ರೀಡಾ ಕೂಟ ನಡೆಯುವ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದ ತನಕ ಮೆರವಣಿಗೆಯಲ್ಲಿ‌ ಕ್ರೀಡಾ ಜ್ಯೋತಿಯನ್ನು ತಂದು ಅಲ್ಲಿ ಬೆಳಗಿಸಲಾಯಿತು.

ಪಡ್ನೂರಿನ ಊರ ಗೌಡರಾಗಿರುವ ಸಂಕಪ್ಪ ಗೌಡ ಕುಂಬಾಡಿ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕ್ರೀಡಾ ಸಂಯೋಜಕ ಮಾದವ ಪೆರಿಯತ್ತೋಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷೆ ವಾರಿಜ ಕೆ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿ ಪವನ್ ದೊಡ್ಡಮನೆ, ಸಂಘಟನಾ ಕಾರ್ಯದರ್ಶಿ ವಸಂತ ನೆಕ್ರಾಜೆ, ಬನ್ನೂರು ವಲಯದ ಅಧ್ಯಕ್ಷ ಮೋಹನ ಗೌಡ ಕಬಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here