ಸವಣೂರು: ವಿಜ್ರಂಭಣೆಯ ಶ್ರೀ ಉಳ್ಳಾಲ್ತಿ ದೈವದ ನೇಮೋತ್ಸವ

0

ಪುತ್ತೂರು: ಸವಣೂರು-ಬೆಳ್ಳಾರೆ ರಸ್ತೆಯ ಪರಣೆಯಿಂದ ಒಂದು ಕಿ.ಮೀ, ದೂರದಲ್ಲಿ ಇರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಶ್ರೀ ಉಳ್ಳಾಲ್ತಿ ದೈವಸ್ತಾನದಲ್ಲಿ ಉಳ್ಳಾಲ್ತಿ ದೈವದ ನೇಮೋತ್ಸವ ಫೆ.8 ರಂದು ವಿಜೃಂಭಣೆಯಿಂದ ಜರಗಿತು.

ಫೆ.8 ರಂದು ರಾತ್ರಿ ಉಳ್ಳಾಲ್ತಿ ದೈವದ ಕಾಲಾವಧಿ ನೇಮೋತ್ಸವ ನಡೆದ ಬಳಿಕ ಶ್ರೀಮತಿ ವಿಸ್ಮಿತಾ ಸಾಜನ್ ಹೆಗ್ಡೆ ರವರ ಸೇವಾರ್ಥವಾಗಿ ಶ್ರೀ ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ಜರಗಿತು. ಕವಿತಾ ವಿ.ಶೆಟ್ಟಿ ಮತ್ತು ದೇಷ್ನಾ ಶೆಟ್ಟಿಯವರ ಸೇವಾರ್ಥವಾಗಿ ಅನ್ನಸಂತರ್ಪಪಣೆ ಜರಗಿತು. ಕಾರ್‍ಯಕ್ರಮದಲ್ಲಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು ಮತ್ತು ಕುಟುಂಬಸ್ಥರು, ಜಾತ್ರೋತ್ಸವ ಸಮಿತಿ, ಶ್ರೀ ವಿಷ್ಣು ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಮತ್ತು ಪರವೂರ 500ಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here