ಭಾರತೀಯ ಸ್ಕೌಟ್ಸ್, ಗೈಡ್ಸ್‌ನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶ್ರೀ ರಾಮಕುಂಜೇಶ್ವರ ಕ.ಮಾ.ಪ್ರೌಢಶಾಲಾ ವಿದ್ಯಾರ್ಥಿಗಳು ಉತ್ತೀರ್ಣ

0

ರಾಮಕುಂಜ: ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಐದು ಗೈಡ್ಸ್ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.


ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅನುಶ್ರೀ ಉಡುಪ ಆರ್ (ರಾಮಕುಂಜ ಅನಂತ ಉಡುಪ ಹಾಗೂ ವಾಣಿ ದಂಪತಿಯ ಪುತ್ರಿ), ಯಜ್ಞ ( ರಾಮಕುಂಜ ದಿವಾಕರ ಶೆಟ್ಟಿ ಮತ್ತು ಪ್ರೇಮ ದಂಪತಿಯ ಪುತ್ರಿ ), ಡಿ.ಎಲ್.ಮಧುರ( ಕೊಣಾಲು ಡಿ. ಲಿಂಗಪ್ಪಗೌಡ ಮತ್ತು ಪುಷ್ಪಾವತಿ ಎಸ್ ದಂಪತಿ ಪುತ್ರಿ), ಸಿಂಚನಾ ( ರಾಮಕುಂಜ ಶೀನಪ್ಪ ಗೌಡ ಮತ್ತು ಸುಮಿತ್ರ ದಂಪತಿ ಪುತ್ರಿ), ಶ್ರೇಯಾ(ರಾಮಕುಂಜ ಎಮ್.ಗಣೇಶ ಆಚಾರ್ಯ ಮತ್ತು ವಿಶಾಲಾಕ್ಷಿ ದಂಪತಿ ಪುತ್ರಿ ) ಅವರು ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ಮಾರ್ಗದರ್ಶನ ಹಾಗೂ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ದರು.

LEAVE A REPLY

Please enter your comment!
Please enter your name here