ಉಪ್ಪಿನಂಗಡಿ: ಶಾಲಾ ಆವರಣದ ಗೆಲ್ಲು ತೆರವು

0

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಮರದ ಗೆಲ್ಲುಗಳನ್ನು ಗೃಹರಕ್ಷಕ ದಳದ ಸಿಬ್ಬಂದಿ ತೆರವುಗೊಳಿಸಿದರು.


ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಶಾಲಾ ಮುಖ್ಯೋಪಾಧ್ಯಾಯ ಹನುಮಂತಯ್ಯ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹ ರಕ್ಷಕದಳ ಸಿಬ್ಬಂದಿ ಗೆಲ್ಲುಗಳ ತೆರವು ಕಾರ್ಯ ನಡೆಸಿದರು. ಈ ಸಂದರ್ಭ ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ., ಎಎಸ್‌ಎಲ್ ಜನಾರ್ದನ ಆಚಾರ್ಯ, ಅಣ್ಣು ಬಿ., ಗೃಹ ರಕ್ಷಕರಾದ ಸೋಮನಾಥ್, ಸಮದ್, ಆರೀಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here