ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿದೇವರಿಗೆ ಸ್ವರ್ಣ ಕಿರೀಟ, ಬೆಳ್ಳಿಯ ಎದೆಕವಚ, ಮಹಾಗಣಪತಿಗೆ ರಜತ ಕವಚ ಸಮರ್ಪಣೆ

0

ಪುತ್ತೂರು: ಗ್ರಾಮ ದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವರಿಗೆ ಭಕ್ತರ ಸಹಕಾರದೊಂದಿಗೆ ವರ್ಷಾವಧಿ ಜಾತ್ರೆಯ ಸಂದರ್ಭ ಫೆ.13ರಂದು ಸ್ವರ್ಣ ಕಿರೀಟ, ಬೆಳ್ಳಿಯ ಎದೆಕವಚ ಹಾಗೂ ಮಹಾಗಣಪತಿ ದೇವರಿಗೆ ರಜತ ಕವಚ ಸಮರ್ಪಣೆ ಮಾಡಲಾಯಿತು.


ಬೆಳಿಗ್ಗೆ ಗೊನೆ ಮುಹೂರ್ತದೊಂದಿಗೆ ವಾರ್ಷಿಕ ಜಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ ಮತ್ತು ಬಜತ್ತೂರು ಗುತ್ತಿನ ನಾಗತಂಬಿಲ ನಡೆಯಿತು. ನಂತರ ತೋರಣ ಮುಹೂರ್ತ ನಡೆಯಿತು. ರಾತ್ರಿ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ ದೈವವಾದ ಶಿರಾಡಿ ದೈವಗಳ ಭಂಡಾರ ತರಲಾಯಿತು. ರಾತ್ರಿ ಶ್ರೀ ದೇವರಿಗೆ ಸ್ವರ್ಣ ಕಿರೀಟ, ಎದೆ ಕವಚ, ಶ್ರೀ ಮಹಾಗಣಪತಿ ದೇವರಿಗೆ ರಜತ ಕವಚ ಸಮರ್ಪಣೆ ಮಾಡಲಾಯಿತು.

ಬಳಿಕ ಶ್ರೀ ದೇವರಿಗೆ ರಂಗಪೂಜೆ, ಪಂಜುರ್ಲಿ ಮತ್ತು ಗ್ರಾಮ ದೈವಗಳಿಗೆ ಕೊಡಿನಾಡಿನಲ್ಲಿ ತಂಬಿಲ ಸೇವೆ, ಪ್ರಸಾದ ವಿತರಣೆ ನಡೆಯಿತು. ನಂತರ ಶ್ರೀ ದೇವರ ಬಲಿ ಹೊರಟು ಅಶ್ವತ್ಥ ಕಟ್ಟೆಪೂಜೆ, ಉತ್ಸವ, ವಸಂತಕಟ್ಟೆಪೂಜೆ ನಡೆದು ದೇವರ ನೃತ್ಯ ಬಲಿ ನಡೆಯಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು. ದೇವಸ್ಥಾನದ ಅರ್ಚಕರು, ಮೊಕ್ತೇಸರರೂ ಆದ ನಾರಾಯಣ ಬಡೆಕ್ಕಿಲ್ಲಾಯರವರ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಕಾಂಚನ ರೋಹಿಣಿ ಸುಬ್ಬರತ್ನಂ, ದೇವಸ್ಥಾನದ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀಧರ ಗೌಡ ‘ಶ್ರೀಹರಿ’ ನಡ್ಪ, ಉಪಾಧ್ಯಕ್ಷರಾದ ಶಿವರಾಮ ಕಾರಂತ ಉರಾಬೆ, ಕಾರ್ಯದರ್ಶಿ ಸುಧಾಕೃಷ್ಣ ಪಿ.ಎನ್., ಜೊತೆಕಾರ್ಯದರ್ಶಿ ಕುಶಾಲಪ್ಪ ಗೌಡ ಬಜತ್ತೂರುಗುತ್ತು, ಕೋಶಾಧಿಕಾರಿ ಜಗದೀಶ ರಾವ್ ಮಣಿಕ್ಕಳ, ಲೆಕ್ಕಪರಿಶೋಧಕರಾದ ಶಿವಣ್ಣ ಗೌಡ ಗುರುಮನೆ ಬಿದಿರಾಡಿ, ಟ್ರಸ್ಟಿಗಳಾದ ಕೆ.ವಿ.ಕಾರಂತ ಪ್ರಸನ್ನ ನಿಲಯ ಉರಾಬೆ, ಲೋಕೇಶ್ ಗೌಡ ಬಜತ್ತೂರು, ದುಗ್ಗಪ್ಪ ಗೌಡ ಅಗರ್ತಿಮಾರು, ಸುಮನ ಬಡೆಕ್ಕಿಲಾಯ, ಯುವ ಟ್ರಸ್ಟ್‌ನ ಸುರೇಶ್ ಬಿದಿರಾಡಿ, ಯಾದವ ನೆಕ್ಕರೆ, ದಿನೇಶ್ ನಡ್ಪ, ಪ್ರಸನ್ನ ಕಾರಂತ, ನೋಣಯ್ಯ ಪದಕ, ಶಿವರಾಮಪ್ರಸಾದ್ ಬಜತ್ತೂರು, ಎಲ್ಯಣ್ಣ ಗೌಡ ಶಿವಪುರ, ಕಿಶೋರ್ ಬಜತ್ತೂರು, ಶ್ರೀ ವಿಷ್ಣುಮೂರ್ತಿ ಭಜನಾ ಸಂಘದ ಅಧ್ಯಕ್ಷ ಉಮೇಶ್ ಗೌಡ ನೆಕ್ಕರೆ, ಕಾರ್ಯದರ್ಶಿ ಕೇಶವ ಗೌಡ ಅಗರ್ತ, ತಾ.ಪಂ.ಮಾಜಿ ಸದಸ್ಯ ಮುಕುಂದ ಬಜತ್ತೂರು ಸೇರಿದಂತೆ ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಭಕ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here