ಡಾ.ರವೀಶ್ ಪಡುಮಲೆ ಗೆ ಸುವರ್ಣರಂಗ ಸಮ್ಮಾನ್ – 2024

0

ಪುತ್ತೂರು: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸುವರ್ಣ ಆರ್ಕೆಡ್ ಬೆಳ್ತಂಗಡಿ ಅರ್ಪಿಸುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ನಾಡಿನ ಸಾಧಕರಿಗೆ ನೀಡುವ ಸುವರ್ಣ ರಂಗ ಸನ್ಮಾನ ಗೌರವ ಪುರಸ್ಕಾರಕ್ಕೆ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ರವೀಶ್ ಪಡುಮಲೆ ಅವರನ್ನು ಆಯ್ಕೆ ಮಾಡಲಾಗಿದೆ.

14ನೇ ವರ್ಷದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಫೆ. 20ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುವರ್ಣ ರಂಗ ಸನ್ಮಾನ ನೀಡಿ ಗೌರವಿಸಲಾಗುವುದು. ಡಾ. ರವಿಶ್ ಪಡುಮಲೆಯವರ ಜೊತೆಗೆ ಖ್ಯಾತ ಭಾಗವತರಾದ ಕಾವ್ಯಶ್ರೀ ಅಜೇರು, ಕಲಾಪೋಷಕ ಮತ್ತು ಸಾಂಸ್ಕೃತಿಕ ಸಂಘಟಕ ಭುಜಬಲಿ ಬಿ ಧರ್ಮಸ್ಥಳ ಇವರು ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿಯ ಅಧ್ಯಕ್ಷ ಸಂಪತ್ ಬಿ ಸುವರ್ಣ ರವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here