ಹಿರಿಯರ ಕ್ರೀಡಾಕೂಟದಲ್ಲಿ ಕರುಣಾಕರ ಪ್ರಭು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ತಮಿಳುನಾಡಿನ ತಿರುನೆಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆ.2ರಿಂದ 4ರವರೆಗೆ ನಡೆದ 43ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ದಿ.ವೆಂಕಟೇಶ ಪ್ರಭು ಮತ್ತು ವಿಮಲಾ ದಂಪತಿಯ ಪುತ್ರ ಕರುಣಾಕರ ಪ್ರಭು 40ರ ವಯೋಮಾನದ 400*100 ರಿಲೆಯಲ್ಲಿ ಪ್ರಥಮ, 4*400 ರಿಲೇಯಲ್ಲಿ ದ್ವಿತೀಯ, ವೇಗದ ನಡಿಗೆಯಲ್ಲಿ ದ್ವಿತೀಯ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯು ಸ್ವೀಡನ್‌ನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here