ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

0

ಪುತ್ತೂರು:ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬೆಳಿಯೂರು ಕಟ್ಟೆಯಲ್ಲಿರುವ ಕೇಂದ್ರ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆಯು ಫೆ.15ರಂದು ನೆರವೇರಿತು.
ಅರ್ಚಕ ರವಿಚಂದ್ರ ನೆಲ್ಲಿತ್ತಾಯರವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.

ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ, ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಎ.ಎಂ ಪ್ರವೀಣ್ ಚಂದ್ರ ಆಳ್ವ,‌ಪ್ರಕಾಶ್ಚಂದ್ರ ಆಳ್ವ, ಚಂದಪ್ಪ ಪೂಜಾರಿ ಕಾಡ್ಲ, ಸೀತಾರಾಮ ಗೌಡ, ವಿನಯ, ಶುಕವಾಣಿ, ಅಂಬ್ರೋಸ್ ಡಿ ಸೋಜ, ನವೀನ್ ಕರ್ಕೇರಾ, ಸುರೇಶ್, ಪ್ರಮೋದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಪ್ರಸಾದ್ ಭಂಡಾರಿ ಸಾಜ, ಪುತ್ತೂರು ಕೋ ಆಪರೇಟಿವ್ ಟೌನ್‌ ಬ್ಯಾಂಕ್ ನಿರ್ದೇಶಕ ಕಿರಣ್ ಶೆಟ್ಟಿ ಬಲ್ನಾಡು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಹಾಗೂ ಸಿಬ್ಬಂದಿಗಳು ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here