ಜೈ ಕರ್ನಾಟಕ ಗಾಯಕರ ದ.ಕ ಜಿಲ್ಲಾ ಸಮಿತಿಯಿಂದ ಪುತ್ತೂರು ತಾಲೂಕು ಸಮಿತಿ ರಚನೆ, ಸದಸ್ಯತ್ವ ನೋಂದಣಿ ಅಭಿಯಾನ

0

ಪುತ್ತೂರು: ಜೈ ಕರ್ನಾಟಕ ಗಾಯಕರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಸಮಿತಿ ರಚನೆ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಫೆ.11ರಂದು ಬೆಳಿಗ್ಗೆ 10.30ಕ್ಕೆ ದರ್ಬೆ ನಿರೀಕ್ಷಣಾ ಮಂದಿರದ ಸಭಾ ಭವನದಲ್ಲಿ ನಡೆಯಿತು. ಇಸ್ಮಾಯಿಲ್ ಬಂಗಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ಸದಸ್ಯತ್ವ ನೋಂದಣಿ, ನೋಂದಾವಣೆ ಬಗ್ಗೆ ಹಾಗೂ ಇನ್ನಿತರ ಬಳಗದ ಬೆಳವಣಿಗೆ ಬಗ್ಗೆ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಧ್ಯಕ್ಷೆ ಕವಿತಾ ದಿನಕರ್, ಜಿಲ್ಲಾ ಉಪಾಧ್ಯಕ್ಷರಾದ ನವಿನಾಂಜಲಿ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ರವಿ ನೇತ್ರಾವತಿ, ನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಲೋಕೇಶ್ ಕೆ ಪುತ್ತೂರು, ಪ್ರವೀಣ್ ಕುದ್ಮಾರ್ ಮತ್ತು ಜಿಲ್ಲಾ ಮಾಧ್ಯಮ ಸಲಹೆಗಾರ ಶಾಹೀನ್ ಅತ್ತಾಜೆ ಬಳಗದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಕೆ ಪುತ್ತೂರು ಸ್ವಾಗತಿಸಿದರು. ತಾಲೂಕು ಮಹಿಳಾ ಅಧ್ಯಕ್ಷರಾದ ಜಯಶ್ರೀ ಪುತ್ತೂರು ಧನ್ಯವಾದ ಮಾಡಿದರು. ಸಭೆಯಲ್ಲಿ ಪುತ್ತೂರು ತಾಲೂಕಿನ ಗಾಯಕ ಗಾಯಕಿಯರು ಸೇರಿದ್ದರು.

ತಾಲೂಕು ಅಧ್ಯಕ್ಷರಾಗಿ ಚಂದ್ರಶೇಖರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್, ಪುತ್ತೂರು ಮಹಿಳಾ ಅಧ್ಯಕ್ಷರಾಗಿ ಜಯಶ್ರೀಯವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here