ಬಿಜೆಪಿ ದ.ಕ ಜಿಲ್ಲಾ ಎಸ್‌ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪೂವಪ್ಪ ನಾಯ್ಕ ಆಲಂಕಾರು

0

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಮಟ್ಟದ ವಿವಿಧ ಮೋರ್ಛಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ದ.ಕ ಜಿಲ್ಲಾ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರಾಗಿರುವ ಪೂವಪ್ಪ ನಾಯ್ಕ ಆಲಂಕಾರುರವರನ್ನು ನೇಮಕಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.
ಪೆರಾಬೆ ಗ್ರಾಮದ ಶಾಂತಿಗುರಿ ಸುಬ್ಬ ನಾಯ್ಕ ಮತ್ತು ಸೀತಮ್ಮ ದಂಪತಿ ಪುತ್ರನಾಗಿರುವ ಪೂವಪ್ಪ ನಾಯ್ಕರವರು ಬಿಜೆಪಿ ಸುಳ್ಯ ಮಂಡಲದ ಕಾರ್ಯದರ್ಶಿಯಾಗಿ, ಸುಳ್ಯ ಮಂಡಲದ ಎಸ್‌ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ, ಶ್ರೀಕ್ಷೇತ್ರ ಶರವೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ, ಆಲಂಕಾರು ಯುವಕ ಮಂಡಲದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಪುತ್ತೂರು ಲ್ಯಾಂಪ್ಸ್ ಸೊಸೈಟಿಯಲ್ಲಿ ಕಳೆದ 20 ವರ್ಷಗಳಿಂದ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ನಿ ಸೌಮ್ಯ ಪುತ್ರರಾದ ಸೆನಾಜಿತ್‌ಸೋಹನ್, ಸತ್ಯಜಿತ್ ಸರ್ಮಾನ್ ಹಾಗೂ ಸಂಪ್ರೀತ್ ಸಹನ್‌ರವರೊಂದಿಗೆ ಪೆರಾಬೆಯ ಶಾಂತಿಗುರಿಯಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here