ಒಡಿಯೂರು ತುಳುನಾಡ ಜಾತ್ರೆ ಮತ್ತು ‘ಸಿರಿರಾಮೆ’ ತುಳು ಸಾಹಿತ್ಯ ಸಮ್ಮೇಳನಕ್ಕೆ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಈಶ್ವರಮಂಗಲ ವತಿಯಿಂದ ಹಸಿರುವಾಣಿ ಸಮರ್ಪಣೆ

0

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಮತ್ತು ‘ಸಿರಿರಾಮೆ’ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಈಶ್ವರಮಂಗಲ ವಲಯದ ಈಶ್ವರಮಂಗಲ, ದೇಲಂಪಾಡಿ, ಅಡೂರು, ಕರ್ನೂರು, ಪಡುಮಲೆ, ಪೆರ್ಲಂಪಾಡಿ ಘಟಕ ಸಮಿತಿ ವತಿಯಿಂದ ಹಸಿರುವಾಣಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.

ಹನುಮಗಿರಿ ಕ್ಷೇತ್ರದ ಧರ್ಮದರ್ಶಿ ಶಿವರಾಮ ಪಿ, ತೆಂಗಿನಕಾಯಿ ಒಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಈಶ್ವರಮಂಗಲ ಶಾಖೆಯ ವ್ಯವಸ್ಥಾಪಕಿ ಸುಜಾತ, ಸಿಬ್ಬಂದಿ ವರ್ಗ, ಒಡಿಯೂರು ಗ್ರಾಮ ವಿಕಾಸ ಯೋಜನೆ ಸಂಯೋಜಕ ಮಹಿತಾ ರೈ, ಉದ್ಯಮಿ ವಿಠಲ್‌ ಶೆಟ್ಟಿ ಸಾಂತ್ಯ, ರಾಜೇಂದ್ರ ಪ್ರಸಾದ್ ರೈ ಮೇನಾಲ, ದೇಲಂಪಾಡಿ ಘಟಕ ಸಮಿತಿ ಅಧ್ಯಕ್ಷ ಕಲ್ಲಡ್ಕಗುತ್ತು ಹಾಗೂ ಸೇವಾದೀಕ್ಷಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here