ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಡಗನ್ನೂರು:  ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ  ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.2 ರಂದು ನಡೆಯಲಿದ್ದು ಇದರ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.15 ರಂದು ಶ್ರೀ ಕ್ಷೇತ್ರದ ಸನ್ನಿಧಿಯಲ್ಲಿ ನಡೆಯಿತು.

ಪ್ರಾರಂಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಆಮಂತ್ರಣ ಪತ್ರಿಕೆ ದೇವರ ಸನ್ನಿಧಿಯಲ್ಲಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಮೇಗಿನಮನೆ, ಗೌರವಾಧ್ಯಕ್ಷರಾದ ಕೃಷ್ಣ ರೈ ಕುದ್ಕಾಡಿ ಹಾಗೂ ರಾಮಕೃಷ್ಣ ಭಟ್ ಚಂದುಕೂಡ್ಲು, ಪ್ರಧಾನ ಕಾರ್ಯದರ್ಶಿ ಪದ್ಮನಾಭ ರೈ ಅರೆಪ್ಪಾಡಿ, ಕೋಶಾಧಿಕಾರಿ ರಾಜೇಶ್ ಸುಳ್ಯಪದವು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯ ಚಂದ್ರಶೇಖರ ಆಳ್ವ ಗಿರಿಮನೆ, ಸದಸ್ಯರುಗಳಾದ ಚಂದ್ರಶೇಖರ ಭಂಡಾರಿ ಕಂಬಳ ನಳಿಕೆಮಜಲು, ಗಂಗಾಧರ ರೈ ಮೇಗಿನಮನೆ, ಉದಯ ಕುಮಾರ್ ಶರವು, ಅನಂದ ಪಾಟಾಳಿ ಎರಾಜೆ, ಸತೀಶ್ ಉಳಿಗ, ಪುರಂದರ ರೈ ಸೇನೆರಮಜಲು, ಸುರೇಶ್ ರೈ ಪಳ್ಳತ್ತಾರು, ಪುಷ್ಪರಾಜ್ ಆಳ್ವ ಗಿರಿಮನೆ, ಸಂಜೀವ ಮಡಿವಾಳ, ರಘುರಾಮ ಪಾಟಾಳಿ ಶರವು, ಉತ್ತಮ್ ಭಟ್ ಪಡ್ಪು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here