ಪೆರ್ಲಂಪಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ-1 ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು. ಪುಟಾಣಿ ಮೋಕ್ಷ ಕಾರ್ಯಕ್ರಮ ಉದ್ಘಾಟಿಸಿದರು. ಪುಟಾಣಿ ಯುಕ್ತಿ ಅಧ್ಯಕ್ಷತೆ ವಹಿಸಿದ್ದರು.

ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಕ್ಕಮ್ಮ, ಗ್ರಾಮ ಪಂಚಾಯತ್ ಸದಸ್ಯೆ ಯಶೋಧ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತ್ ಕುಮಾರ್, ಕೊಳ್ತಿಗೆ ಶಾಲಾ ಮುಖ್ಯಗುರು ನೀಲಾವತಿ, ಕೊಳ್ತಿಗೆ ವಲಯ ಮೇಲ್ವಿಚಾರಕಿ ಸುಲೋಚನ ಉಪಸ್ಥಿತರಿದ್ದರು.

ದಿವ್ಯ, ಅಶ್ವಿನಿ ಹಾಗೂ ವೆಂಕಟರಮಣ ಆಚಾರ್ಯರವರು ರ್‍ಯಾಕ್ ಹಾಗೂ ಮಮತಾ ರವರು ತುರಿಮಣೆಯನ್ನು ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದರು. ಕವಿತರವರಿಗೆ ಸೀಮಂತ ಕಾರ್ಯಕ್ರಮ ಮತ್ತು ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಕ್ಕಮ್ಮರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಪುಟಾಣಿಗಳು ಪ್ರಾರ್ಥಿಸಿದರು. ಪುಟಾಣಿ ಉಜ್ವಲ್ ಸ್ವಾಗತಿಸಿದರು. ಪುಟಾಣಿ ಅನ್ಬಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here