ಮುಂಡೂರು: ಉದಯಗಿರಿ ವಿಷ್ಣುಮೂರ್ತಿ ಭಜನಾ ಮಂಡಳಿಗೆ ಆಯ್ಕೆ

0

ಅಧ್ಯಕ್ಷ ಪ್ರವೀಣ್ ಕಾರ್ಯದರ್ಶಿ ಮಂಜುನಾಥ್, ಕೋಶಾಧಿಕಾರಿ ಸುರೇಶ್ ನಾಯ್ಕ

ಪುತ್ತೂರು: ಮುಂಡೂರು ಉದಯಗಿರಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಮುಲಾರು, ಕಾರ್ಯದರ್ಶಿಯಾಗಿ ಮಂಜುನಾಥ್ ಕೊರುಂಗು ಹಾಗೂ ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ಬೊಲ್ಲಗುಡ್ಡೆ ಆಯ್ಕೆಯಾಗಿದ್ದಾರೆ.


ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪಂಜಳ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಗಣೇಶ್ ಸುವರ್ಣ ಬೊಲ್ಲಗುಡ್ಡೆ, ಜತೆ ಕಾರ್ಯದರ್ಶಿಯಾಗಿ ದೇವಿದಾಸ್ ಕುರಿಯ ಆಯ್ಕೆಯಾಗಿದ್ದಾರೆ.


ಸಭೆಯಲ್ಲಿ ಜೊತೆ ಕಾರ್ಯದರ್ಶಿ ದೇವಿದಾಸ್ ಕುರಿಯ ವರದಿ ಮಂಡಿಸಿದರು. ಕೋಶಾಧಿಕಾರಿ ನವೀನ್ ಕೊರುಂಗು ಲೆಕ್ಕ ಪತ್ರವನ್ನು ಮಂಡಿಸಿದರು. ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪಂಜಳ ವಂದಿಸಿದರು.

LEAVE A REPLY

Please enter your comment!
Please enter your name here