ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ

0

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಪ್ರಾರಂಭಗೊಂಡು ಫೆ.17ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.


ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಫೆ.15ರಂದು ಬೆಳಿಗ್ಗೆ ಕುಮಾರದಾರ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ರಾತ್ರಿ ದೇವರಿಗೆ ರಂಗಪೂಜೆ ನಡೆಯಿತು.


ಫೆ.16 ರಂದು ಪೂರ್ವಾಹ್ನ ಗಣಹೋಮ, ಸೀಯಾಳಾಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, ಶ್ರೀ ಮಹಾವಿಷ್ಣು ಭಜನಾ ಮಂಡಳಿ ಮುಗೇರು ಸವಣೂರು ಇವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.


ಸಂಜೆ ಕ್ಷೇತ್ರದ ದೈವಗಳ ಭಂಡಾರ ತೆಗೆದ ಬಳಿಕ ವೀರಮಂಗಲ ಪಿ.ಎಂ.ಶ್ರೀ ಸ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಿತು. ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆದ ಬಳಿಕ ಕ್ಷೇತ್ರದ ದೈವಗಳಾದ ಉಳ್ಳಾಕುಲು, ಹುಲಿಭೂತ, ಕೊಡಮಣಿತ್ತಾಯ, ಅಂಙಣ ಪಂಜುರ್ಲಿ ದೈವಗಳ ನೇಮ, ಫೆ.17ರಂದು ಬೆಳಿಗ್ಗೆ ಶ್ರೀರಕ್ತೇಶ್ವರಿ, ಶಿರಾಡಿ ರಾಜನ್ ದೈವ, ಗುಳಿಗ ದೈವಗಳ ನೇಮೋತ್ಸವದೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಉತ್ಸವ ಸಮಿತಿ, ವಿಶ್ವಸ್ಥ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದರು.


ಫೆ.23 ದೊಂಪದ ಬಲಿ:
ವೀರಮಂಗಲದ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಫೆ.23ರಂದು ರಾತ್ರಿ ಭಂಡಾರ ತೆಗೆದು ಫೆ.24ರಂದು ಬೆಳಿಗ್ಗೆ ವೀರಮಂಗಲ ಶ್ರೀ ಶಿರಾಡಿ ರಾಜನ್ ದೈವದ ದೊಂಪದ ಬಲಿ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here