ಪುತ್ತೂರು ಪೇಟೆಯಲ್ಲಿ ಬನ್ನೂರು ಶ್ರೀ ದೆಯ್ಯೆರೆ ಮಾಡ ಕ್ಷೇತ್ರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ವಿತರಣೆ

0

ಪುತ್ತೂರು: ಫೆ.21 ಮತ್ತು 22ರಂದು ನಡೆಯುವ ಬನ್ನೂರು ಶ್ರೀ ದೆಯ್ಯೆರೆ ಮಾಡ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ, ಸಾನಿಧ್ಯಗಳ ಬ್ರಹ್ಮಕಲಶೋತ್ಸವದ ಆಮಂತ್ರಣಪತ್ರ ಫೆ.19 ರಂದು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು.

ಸಂಜೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಊರವರು ಸೇರಿ ಪ್ರಾರ್ಥನೆ ಮಾಡಲಾಯಿತು. ಮಂತ್ರಾಲಯದ ಎದುರು ಜೀರ್ಣೋದ್ಧಾರ ಸಮಿತಿ ಖಜಾಂಚಿ ಸತೀಶ್ ಆನೆಮಜಲು ಅವರು ತೆಂಗಿನ ಕಾಯಿ ಒಡೆಯುವ ಮೂಲಕ‌ ಆಮಂತ್ರಣ ಪತ್ರ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎ ವಿ ನಾರಾಯಣ ಕಾರ್ಯದರ್ಶಿ ಮೌನೀಶ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ, ಖಜಾಂಜಿ ರಮೇಶ್ ಗೌಡ ನೀರ್ಪಾಜೆ, ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ, ಶೇಖರ್ ಬಿರ್ವ, ಕುಶಲ, ವಾಸಪ್ಪ ಗೌಡ, ಸಂತೋಷ್, ಹರಿಪ್ರಸಾದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here