ಮರ್ದಾಳ ಬಳಿ ಅಪಘಾತ-ಬೈಕ್ ಸವಾರನಿಗೆ ಗಂಭೀರ ಗಾಯ

0

ಕಡಬ: ಇಲ್ಲಿನ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.


ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ ತಾಲೂಕು ಕೊಂಬಾರು ಮಣಿಭಾಂಡ ಮೆಕ್ಯಾನಿಕ್ ವಾಸು ಎಂದು ಗುರುತಿಸಲಾಗಿದೆ.
ಕೆ ಎಸ್. ಆರ್ ಟಿ ಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here