ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಪ್ರವೀಣ್ ಕೂಡಮರ ಆಯ್ಕೆ

0

ಪುತ್ತೂರು: ಕರ್ನಾಟಕ ರಾಜ್ಯ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಪ್ರವೀಣ್ ಕುಮಾರ್ ಕೂಡಮರ ಆಯ್ಕೆಯಾಗಿರುತ್ತಾರೆ. ಬಳ್ಳಾರಿಯಲ್ಲಿ ನಡೆದ ರಾಜ್ಯ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಮಹಾಸಭೆ ಹಾಗೂ ಚುನಾವಣೆಯಲ್ಲಿ ಪ್ರವೀಣ್ ಇವರು 2023 -27ನೇ ಸಾಲಿನ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.


ಈ ಹಿಂದೆ ರಾಜ್ಯ ಸಂಸ್ಥೆಯ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಇವರು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತ ರಾಜ್ಯ ತಂಡ ಹಾಗೂ ಮಂಗಳೂರು ವಿವಿ ತಂಡಗಳಿಗೆ ತರಬೇತುದಾರರಾಗಿದ್ದರು.
ಕೂಡಮರ ದಿ. ಎನ್ .ಕೆ ತಿಮ್ಮಪ್ಪ ಪೂಜಾರಿ ಹಾಗೂ ಭಾರತಿ ಇವರ ಪುತ್ರರಾಗಿರುವ ಇವರು ಪ್ರಸ್ತುತ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here