ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮರು ವಿನ್ಯಾಸಗೊಂಡ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಅನಾವರಣ

0

ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮರು ವಿನ್ಯಾಸಗೊಂಡ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ ವಿದ್ಯಾಸಂಸ್ಥೆ ಅಭಿವೃದ್ಧಿ ಹೊಂದಲು ಮತ್ತು ಕಾಲೇಜಿನ ಎಲ್ಲಾ ಮಾಹಿತಿಗಳು ಹೊರ ಜಗತ್ತಿಗೆ ತಿಳಿಯಪಡಿಸಲು ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳು ಅತ್ಯಂತ ಸಹಾಯಕಾರಿ. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ವ್ಯಾಪಕವಾಗಿ ಹಬ್ಬಿದೆ. ಸೋಶಿಯಲ್ ಮೀಡಿಯಾ ಎಂಬುದು ಒಬ್ಬರಿಗೊಬ್ಬರು ಸಂಪರ್ಕದಿಂದಿರಲು, ಮಾಹಿತಿಯನ್ನು ಹಂಚಿಕೊಳ್ಳಲು ಹೀಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದೆ. ಆದ್ದರಿಂದ ಇದು ಒಂದು ಅವಿಭಾಜ್ಯ ಅಂಗವಾಗಿದೆ. ಈ ಮೂಲಕ ಹದಿಹರೆಯದವರಿಂದ ಹಿಡಿದು ವೃದ್ಧರವರೆಗೂ ಅವರ ಅಗತ್ಯಕ್ಕೆ ತಕ್ಕಂತೆ ಸೋಶಿಯಲ್ ಮೀಡಿಯಾಗಳನ್ನು ಬಳಕೆ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಮಾತನಾಡಿ ಸಾಮಾಜಿಕ ಜಾಲತಾಣ ಎನ್ನುವುದು ಪ್ರತಿಯೊಬ್ಬರ ಜೀವನದ ಪ್ರಮುಖ ಅಂಗವಾಗಿದೆ. ಒಬ್ಬರೊಬ್ಬರು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು, ಸಮೂಹ ಸಂವಹನ ನಡೆಸಲು ಮತ್ತು ಸಾಮಾಜಿಕ ಬದಲಾವಣೆಗೆ ವೆಬ್ಸೈಟ್ ಪ್ರಮುಖ ಸಾಧನವು ಹೌದು. ಒಂದು ಕಡೆ ಸಾಮಾಜಿಕ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿದೆ. ಒಳ್ಳೆಯ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುತ್ತಿದೆ, ಕಾಲೇಜಿನಲ್ಲಿ ನಡೆಯುವ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಅನೇಕ ಸುಧಾರಿತ ವಿಚಾರಗಳು, ಹೊಸ ಹೊಸ ಮತ್ತು ಆಸಕ್ತಿದಾಯಕ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲು ಇದು ಅತ್ಯಂತ ಸಹಾಯಕಾರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳು ಸಂವಹನದ ಅತಿದೊಡ್ಡ ಸಾಧನಗಳಲ್ಲಿ ಒಂದಾಗಿದೆ ಮತ್ತು ವೇಗವಾಗಿ ಜನಪ್ರಿಯತೆಯನ್ನು ಗಳಿಸುತ್ತಿದೆ. ಸಾಮಾಜಿಕ ಮಾಧ್ಯಮವು ಆಲೋಚನೆಗಳು, ವಿಷಯ, ಮಾಹಿತಿ, ಸುದ್ದಿ ಇತ್ಯಾದಿಗಳನ್ನು ವೇಗವಾಗಿ ಹಂಚಿಕೊಳ್ಳಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಗೋಪಾಲಕೃಷ್ಣ ಭಟ್, ಸದಸ್ಯ ಕೆ. ಎನ್ ಸುಬ್ರಹ್ಮಣ್ಯ ಭಟ್, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಉಪನ್ಯಾಸಕ ಶ್ಯಾಮ್ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು. ಉಪಪ್ರಾಂಶುಪಾಲ ದೇವಿಚರಣ್ ರೈ ಸ್ವಾಗತಿಸಿ, ಶ್ರೀವತ್ಸ ವಂದಿಸಿದರು.

LEAVE A REPLY

Please enter your comment!
Please enter your name here