ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನ- ಫೆ.21ರಿಂದ ಮಾ.19ರವರೆಗೆ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ಫೆ.21ರಿಂದ ಮಾ.19ರವರೆಗೆ ವೇ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಶ್ರೀ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಜರಗಲಿದೆ.


ಫೆ.21ರಂದು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಸಂಜೆ 7ರಿಂದ ಉತ್ಸವ ನಡೆಯಲಿದೆ. ಫೆ.೨೨ರಂದು ಬೆಳಗ್ಗೆ ಉತ್ಸವ ಸಂಜೆ 7ರಿಂದ ಉತ್ಸವ ನಡೆಯಲಿದೆ. ಫೆ.23ರಂದು ಹುಣ್ಣಿಮೆ ಒಂದನೇ ಮಖೆಕೂಟ ನಡೆಯಲಿದೆ. ಅಂದು ರಾತ್ರಿ 8:30ರಿಂದ ಬಲಿ ಹೊರಟು ಉತ್ಸವ- ರಥೋತ್ಸವ, ಬಲಿ, ಮಹಾಪೂಜೆ ನಡೆಯಲಿದೆ.

ಫೆ.24ರಂದು ಪ್ರಾತಃಕಾಲದಲ್ಲಿ ತೀರ್ಥಸ್ನಾನ ನಡೆಯಲಿದ್ದು, ಬೆಳಗ್ಗೆ 7:30ರಿಂದ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ರಿಂದ ಉತ್ಸವ ನಡೆಯಲಿದೆ. ಫೆ. ಬೆಳಗ್ಗೆ ಉತ್ಸವ, ಶ್ರೀ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಪೂರ್ವಾಹ್ನ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ, ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 7ರಿಂದ ಉತ್ಸವ ನಡೆಯಲಿದೆ.

ಫೆ.26ರಂದು ಬೆಳಗ್ಗೆ ಉತ್ಸವ, ಸಂಜೆ 7ರಿಂದ ಉತ್ಸವ ನಡೆಯಲಿದೆ. ಫೆ.27ರಂದು ಬೆಳಗ್ಗೆ 6ಕ್ಕೆ ದೇವಾಲಯದ ಬಾಗಿಲು ತೆರೆಯುವುದು. ಸಂಜೆ 7ರಿಂದ ದೇವರು ಬಲಿ ಹೊರಟು ರಥಬೀದಿಯಿಂದ ಹಳೆ ಬಸ್ ನಿಲ್ದಾಣದವರೆಗೆ ಹೋಗಿ ಕಟ್ಟೆಪೂಜೆಯಾಗಿ ಸರಕಾರಿ ಪ್ರಾಥಮಿಕ ಶಾಲಾ ಮಾರ್ಗವಾಗಿ ಬಂದು ಸಂಗಮದಲ್ಲಿ ಅವಭೃತ ಸ್ನಾನವಾಗಿ ಧ್ವಜಾವರೋಹಣ ನೆರವೇರಲಿದೆ.

ಮಾ.3ರಂದು ಅಷ್ಟಮಿ 2ನೇ ಮಖೆಕೂಟ ನಡೆಯಲಿದ್ದು, ರಾತ್ರಿ 8:30ರಿಂದ ಬಲಿ ಹೊರಟು ಉತ್ಸವ, ರಥೋತ್ಸವ, ಬಲಿ, ಮಹಾಪೂಜೆ ನಡೆಯಲಿದೆ. ಮಾ.4ರಂದು ಪ್ರಾತಃಕಾಲದಲ್ಲಿ ತೀರ್ಥಸ್ನಾನ ನಡೆಯಲಿದ್ದು, ಬೆಳಗ್ಗೆ 7:30ರಿಂದ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಮಾ. 8ರಂದು ಮಹಾಶಿವರಾತ್ರಿ 3ನೇ ಮಖೆಕೂಟ ನಡೆಯಲಿದ್ದು, ರಾತ್ರಿ 8ರಿಂದ ಬಲಿ ಹೊರಟು ಉತ್ಸವ, ಮಹಾಪೂಜೆ ನಡೆಯಲಿದೆ. ಮಾ.9ರಂದು ಪ್ರಾತಃಕಾಲದಲ್ಲಿ ತೀರ್ಥಸ್ನಾನ ನಡೆಯಲಿದ್ದು, ಬೆಳಗ್ಗೆ 6:30ರಿಂದ ಬಲಿ ಹೊರಟು ರಥೋತ್ಸವ, ಉತ್ಸವ, ದರ್ಶನಬಲಿ, ಬಟ್ಟಲು ಕಾಣಿಕೆ, ಶ್ರೀ ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಮಾ.15ರಂದು ರಾತ್ರಿ ಮಹಾಕಾಳಿ ಮೆಚ್ಚಿ ನಡೆಯಲಿದ್ದು, ರಾತ್ರಿ 9ರಿಂದ ಅನ್ನಸಂತರ್ಪಣೆ ನಡೆಯಲಿದೆ. ಮಾ.19ರಂದು ರಾತ್ರಿ 8ಕ್ಕೆ ಕದಿಕ್ಕಾರು ಬೀಡಿನಿಂದ ಭಂಡಾರ ಬಂದು ದೇವಾಲಯದ ಸಂತೆಮಜಲಿನಲ್ಲಿ ದೊಂಪದ ಬಲಿ ನೇಮೋತ್ಸವ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮಗಳು: ಫೆ.23ರಂದು ಸಂಜೆ 6ರಿಂದ ರಾತ್ರಿ 1ರವರೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಪ್ಪಿನಂಗಡಿ ಘಟಕದ ವತಿಯಿಂದ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ ಜರಗಲಿದೆ. ಫೆ.25ರಂದು ಸಂಜೆ 6ರಿಂದ ಟೀಂ ದಕ್ಷಿಣ ಕಾಶಿ ಇವರಿಂದ ‘ಉಬಾರ್ ಉತ್ಸವ’ ನಡೆಯಲಿದೆ. ಮಾ.3ರಂದು ರಾತ್ರಿ 8ರಿಂದ 10ರವರೆಗೆ ಸ್ವರ ಸಿಂಚನ ಸುಗಮ ಸಾಹಿತ್ಯ ಬಳಗ, ಸುಳ್ಯ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 10:30ರಿಂದ 2ರವರೆಗೆ ಗಯಾಪದ ಕಲಾವಿದೆರ್ ಉಬಾರ್ ಇವರಿಂದ ‘ಮುರಳಿ ಈ ಪಿರ ಬರೊಲಿ’ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಮಾ.8ರಂದು ರಾತ್ರಿ 8ರಿಂದ 10ರವರೆಗೆ ಹಂಸಧ್ವನಿ ಮೆಲೋಡಿಸ್ ಉಪ್ಪಿನಂಗಡಿ ಇವರಿಂದ ಕೆರೋಕೆ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10:30ರಿಂದ ಬೆಳಗ್ಗೆ 4:30ರವರೆಗೆ ಯಕ್ಷನಂದನ ಕಲಾ ಸಂಘ ಗೋಕುಲನಗರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ರುಕ್ಯಾಂಗದ ಚರಿತ್ರೆ’ ಯಕ್ಷಗಾನ ನಡೆಯಲಿದೆ. ಮಾ.15ರಂದು ರಾತ್ರಿ 8:30ರಿಂದ 10:30ರವರೆಗೆ ಕೃತಿ ಕೈಲಾರ್ ಮತ್ತು ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದೇವಾಲಯದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here