ನಾಣಿಲ ಶಾಲಾ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಭೇಟಿ

0

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲಾ ಮಕ್ಕಳು ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕ್ಷೇತ್ರ ಭೇಟಿ ಅಧ್ಯಯನ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಣಿಯೂರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕಾಣಿಯೂರು, ಅಂಚೆ ಕಚೇರಿ ಕಾಣಿಯೂರು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು, ಗ್ರಾಮ ಪಂಚಾಯಿತಿ ಕಾಣಿಯೂರು, ಇಲ್ಲಿಗೆ ಭೇಟಿ ನೀಡಲಾಯಿತು.

ಈ ಎಲ್ಲಾ ಸಂಸ್ಥೆಯ ಅಧ್ಯಕ್ಷರುಗಳು ಹಾಗೂ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗ ನಮ್ಮ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ನಾಣಿಲ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ, ಮುಖ್ಯಗುರು ಪದ್ಮಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ ಸದಸ್ಯ ಪುರಂದರ ಅಂಬುಲ ಹಾಗೂ ಸಹ ಶಿಕ್ಷಕ ಸುನಿಲ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here