ಪುತ್ತೂರಿನಲ್ಲಿ ಕೃಷಿ, ಜಲಾನಯನ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿದ್ದ ದಯಾನಂದ ಎಚ್. ನಿಧನ

0

ಪುತ್ತೂರು: ಪುತ್ತೂರಿನಲ್ಲಿ ಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ್ದ ದಯಾನಂದ ಹೆಚ್.(66ವ)ರವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪಟ್ಯೋಡಿ ನಿವಾಸಿಯಾಗಿದ್ದು ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ದಿ.ಕೊರಗ್ಗಪ್ಪ ಪೂಜಾರಿಯವರ ಪುತ್ರರಾದ ದಯಾನಂದ ಎಚ್.ರವರು ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನಲ್ಲಿ ಜಲಾನಯನ ಇಲಾಖೆ, ಕೃಷಿ ಇಲಾಖೆ ಹಾಗೂ ಮಂಗಳೂರುನಲ್ಲಿ ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಕ್ಕೇಡಿ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿರುವ ಪತ್ನಿ ಗುಣವತಿ, ಪುತ್ರರಾದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್., ಪುತ್ರಿಯರಾದ ನಿಶ್ಮಿತಾ ಮತ್ತು ನಿವೇದಿತಾರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here