ದರ್ಬೆ: ಸ್ಕೂಟರ್‌ಗೆ ಲಾರಿ ಡಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಪುತ್ತಿಲ ಪರಿವಾರ

0

ಪುತ್ತೂರು: ದರ್ಬೆ ಸ್ಕೂಟರ್‌ವೊಂದಕ್ಕೆ ಲಾರಿಯೊಂದು ಡಿಕ್ಕಿಯಾದ ಘಟನೆ ಫೆ.20ರ ರಾತ್ರಿ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದ್ದು, ಅಪಘಾತದಿಂದಾಗಿ ತೀವ್ರ ಗಾಯಗೊಂಡ ಸವಾರನನ್ನು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮತ್ತು ಅವರ ಜೊತೆಗಿದ್ದವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದ ಘಟನೆ ನಡೆದಿದೆ.


ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಸ್ಕೂಟರ್ ಸವಾರ ಆಗಿದ್ದು, ಅವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸ್ಕೂಟರ್ ಸವಾರ ದಿವಾಕರ ಅವರು ತೀವ್ರ ಗಾಯಗೊಂಡಿದ್ದರು. ಇದೇ ಸಂದರ್ಭ ಅದೇ ರಸ್ತೆಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಅವರು ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here