ಫೆ.24: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂಡಳಿಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

0

ಮಾ.23, 24: ಲೋಕಾರ್ಪಣಾ ಕಾರ್ಯಕ್ರಮ, ಮಹಾ ಚಂಡಿಕಾಯಾಗ

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂಡಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾಂಭ ಭಜನಾ ಮಂದಿರದ ಲೋಕಾರ್ಪಣಾ ಕಾರ್ಯಕ್ರಮ ಮತ್ತು ಮಹಾ ಚಂಡಿಕಾಯಾಗವು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.23 ಹಾಗೂ ಮಾ.24ರಂದು ನಡೆಯಲಿದ್ದು, ಅದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫೆ.24ರಂದು ಸಾಯಂಕಾಲ ಭಜನಾ ಮಂಡಳಿ ವಠಾರದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ| ಕೆ. ಸುರೇಶ್ ಪುತ್ತೂರಾಯ, ಇಡ್ಕಿದು ಸೇವಾಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕ‌ರ್ ಶೆಟ್ಟಿ ಬೀಡಿನಮಜಲುರವರು ಆಗಮಿಸಲಿದ್ದಾರೆ. ಶ್ರೀಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಜಗದೀಶ ಪೂಜಾರಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಭಜನಾ‌ಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here