ಫೆ.22,23 ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ನೇಮೋತ್ಸವ, ಶ್ರೀ ಸತ್ಯನಾರಾಯಣ ಪೂಜೆ

0

ನಿಡ್ಪಳ್ಳಿ: ಸುಮಾರು 5 ಶತಮಾನಗಳ ಹಿಂದೆ ಮೂಡಿಬಂದ ಮಾತೆ ದೇಯಿ ಬೈದೆತಿಯ ಅವಳಿ ಪುತ್ರರತ್ನರಾದ ಕೋಟಿ ಚೆನ್ನಯರು ನಡೆದಾಡಿದ ಕರ್ನಪ್ಪಾಡಿ ಗರಡಿಯಲ್ಲಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇವಾ ಸಮಿತಿ ವತಿಯಿಂದ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.22 ಮತ್ತು 23 ರಂದು ನಡೆಯಲಿದೆ.

ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಎನ್.ಶಿವಪ್ಪ ಪೂಜಾರಿ ನುಳಿಯಾಲು ಅಧ್ಯಕ್ಷತೆಯಲ್ಲಿ ಕರ್ನಪ್ಪಾಡಿ ಮನೆಯವರು ಹಾಗೂ ಗರಡಿ ಸೇವಾ ಸಮಿತಿ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆಯಲಿದ್ದು, ತಾಲೂಕಿನ ಭಕ್ತರಲ್ಲದೆ ಹೊರ ತಾಲೂಕಿನ ಭಕ್ತಾದಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಫೆ.22 ರಂದು ಬೆಳಿಗ್ಗೆ ಗಂಟೆ 10 ರಿಂದ ಗಣಪತಿ ಹೋಮ, ಬ್ರಹ್ಮರ ತಂಬಿಲ ಮತ್ತು ನಾಗ ತಂಬಿಲ. ಸಂಜೆ ಗಂಟೆ 6 ರಿಂದ ಭಜನಾ ಕಾರ್ಯಕ್ರಮ. ನಂತರ ರಾತ್ರಿ ಭಂಡಾರ ತೆಗೆದು ಕೊಡಮಂತಾಯ ದೈವದ ನೇಮ ನಡೆಯಲಿದೆ.

ಫೆ.23 ರಂದು ಸಂಜೆ ಗಂಟೆ 5 ಕ್ಕೆ ಹೋಮ, ಗಂಟೆ 6 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ಗಂಟೆ 8 ಕ್ಕೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 10 ಕ್ಕೆ ಬೈದರುಗಳ ಗರಡಿ ಇಳಿಯುವುದು. ರಾತ್ರಿ ಗಂಟೆ 2 ಕ್ಕೆ ಕಿನ್ನಿದಾರು ಗರಡಿ ಇಳಿಯುವುದು. ಪ್ರಾತಃಕಾಲ ಗಂಟೆ 4 ಕ್ಕೆ ದರ್ಶನ ಪಾತ್ರಿಗಳ ಸೇಟ್, ಬೈದರುಗಳ ಸೇಟ್. ಫೆ. 24 ರಂದು ಬೆಳಿಗ್ಗೆ ಗಂಟೆ 6 ಕ್ಕೆ ಪ್ರಸಾದ ವಿತರಣೆ ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ಎನ್.ಶಿವಪ್ಪ ಪೂಜಾರಿ ನುಳಿಯಾಲು, ಸಮಿತಿ ಸದಸ್ಯರು ಹಾಗೂ ಕರ್ನಪ್ಪಾಡಿ ಮನೆಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here