ನಳೀಲು: ಶ್ರೀ ದೇವರಿಗೆ ಚಿನ್ನದ ಕವಚ ಸಮರ್ಪಣೆ – ಪತಿಯ ಸಂಕಲ್ಪಈಡೇರಿಸಿದ ಪತ್ನಿ..!

0


ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್‌ ಕುಮಾರ್ ರೈಯವರು ಸಮರ್ಪಿಸಿದ್ದಾರೆ. ಪತಿಯ ಆಶಯದಂತೆ ಅವರು ದೇವರಿಗೆ ಈ ಸೇವೆ ನೀಡಿದ್ದಾರೆ. ಈ ಸೇವೆಯನ್ನು ಅವರು ಬುಧವಾರ ಪತಿ ಸಂತೋಷ್ ಕುಮಾರ್ ರೈ ಹಾಗೂ ಮಗಳ ಜೊತೆಗೆ ಶ್ರೀ ದೇವರಿಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ವೀಣಾ ಸಂತೋಷ್‌ಕುಮಾರ್ ರೈಯವರು, ನಮ್ಮ ಮದುವೆಯಾದ ಸಂದರ್ಭದಲ್ಲಿ ಇದೊಂದು ಸಣ್ಣ ದೇವಸ್ಥಾನವಾಗಿತ್ತು. ಬಳಿಕದ ದಿನಗಳಲ್ಲಿ ಇಲ್ಲಿ ಅಭಿವೃದ್ದಿಯಾಗುತ್ತಲೇ ಬಂದಿದೆ. ನನ್ನ ಪತಿಯು ಭಕ್ತರನ್ನು ಒಗ್ಗೂಡಿಸಿಕೊಂಡು ದೇವಸ್ಥಾನದ ಅಭಿವೃದ್ದಿ ಮಾಡುತ್ತಾ ಪ್ರಸಕ್ತ ಬ್ರಹ್ಮಕಲಶೋತ್ಸವದಲ್ಲಿ ನಾವೆಲ್ಲ ಇದ್ದೇವೆ. ಶ್ರೀ ಸುಬ್ರಹ್ಮಣ್ಯ ದೇವರು ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬಂದಿದ್ದಾರೆ. ಈ ನಡುವೆ ನನ್ನ ಪತಿಯು ದೇವರಿಗೆ ಚಿನ್ನದ ಕವಚ ನೀಡುವ ತನಕ ತಾನು ಚಿನ್ನ ಧರಿಸುವುದಿಲ್ಲ ಎಂದು ಸಂಕಲ್ಪ ಮಾಡಿಕೊಂಡಿದ್ದರು. ಪತಿಯು ಮದುವೆಯಾದ ಬಳಿಕ ನನಗೆ ಶಿಕ್ಷಣ ನೀಡಿ ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಅವರ ಸಂಕಲ್ಪದಂತೆ ನನ್ನ ಸ್ವಂತ ಹಣದಿಂದ ಚಿನ್ನದ ಕವಚವನ್ನು ದೇವರಿಗೆ ಸಮರ್ಪಿಸಿದ್ದೇವೆ. ಅಲ್ಲದೆ ಪತಿಗೆ ಚಿನ್ನದ ಸರವನ್ನು ನೀಡಿದ್ದೇನೆ ಎಂದರು. ಸಂತೋಷ್ ಕುಮಾರ್ ರೈ ಅವರ ತಾಯಿ ಗಿರಿಜಾ ರೈ ನಳೀಲು ಅವರು ದೇವರಿಗೆ ಚಿನ್ನದ ಮೋಹನ ಮಾಲೆ ಸಮರ್ಪಿಸಿದರು.

LEAVE A REPLY

Please enter your comment!
Please enter your name here