ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಫೆ.22ರಂದು ಜರುಗಿತು.

ಮುಖ್ಯ ಅತಿಥಿಯಾಗಿ ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್‌ ಎಮ್‌ ಪಿ ಪುತ್ತೂರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸುವುದರೊಂದಿಗೆ ಸಾಮಾಜಿಕ ಬದ್ಧತೆಯ ಜೀವನವನ್ನು ನಡೆಸಬೇಕು ಎಂದರು.

ಇಂದ್ರಪ್ರಸ್ಥ ಸಂಸ್ಥೆಗಳ ಸಂಚಾಲಕ ಯು.ಜಿ ರಾಧ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತಿಥಿಗಳು ದೀಪವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಶ್ರೀ ಹೆಚ್ ಕೆ ಪ್ರಕಾಶ್, ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರಾದ ರಾಜೇಶ್ ಪೈ, ಸುಧಾಕರ್ ಶೆಟ್ಟಿ, ಸುರೇಶ್ ಉಪಸ್ಥಿತರಿದ್ದರು. ಇಂಗ್ಲೀಷ್‌ ಭಾಷಾ ಉಪನ್ಯಾಸಕಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here