ಬೆಳಂದೂರು: ಅಕ್ರಮ ಪ್ರವೇಶಿಸಿ ಬೆದರಿಕೆ ಆರೋಪ-ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

0

ಕಾಣಿಯೂರು: ಜಮೀನಿಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿರುವ ಆರೋಪದಡಿ ವ್ಯಕ್ತಿಯೋರ್ವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಯಿಮಣ ಗ್ರಾಮದ ತುಂಬ್ಯ ಎಂಬಲ್ಲಿ ಘಟನೆ ನಡೆದಿದೆ.

ಟಿ.ಪದ್ಮಯ್ಯ ಗೌಡ ಹಾಗೂ ಅವರ ತಮ್ಮ ಮೋನಪ್ಪ ಗೌಡರ ಮಧ್ಯೆ ಜಮೀನಿನ ವಿಚಾರದಲ್ಲಿ ಸಿವಿಲ್ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಫೆ.21ರ ರಾತ್ರಿ ಪದ್ಮಯ್ಯ ಹಾಗೂ ಅವರ ಪತ್ನಿ ತುಂಬ್ಯದ ಮನೆಯಲ್ಲಿದ್ದ ವೇಳೆ ಮೋನಪ್ಪ ಗೌಡ ಹಾಗೂ ಅವರ ಮಗ ನವೀನ ಕೈಯಲ್ಲಿ ಕತ್ತಿ ಹಿಡಿದುಕೊಂಡು ಮನೆ ಅಂಗಳಕ್ಕೆ ಅಕ್ರಮ ಪ್ರವೇಶಿಸಿ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಒಡ್ಡಿ, ಕಿಟಕಿ ಗಾಜು ಹುಡಿ ಮಾಡಿ ಹಾನಿ ಮಾಡಿದ್ದಾರೆ ಎಂದು ಪದ್ಮಯ್ಯ ಗೌಡ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here