ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ಮಹೋತ್ಸವ, ಆಶ್ಲೇಷ ಬಲಿ

0

ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23ರಂದು 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಸಾಮೂಹಿಕ ಆಶ್ಲೇಷ ಬಲಿ ಸೇವೆ ನಡೆಯಿತು.

ಬೆಳಿಗ್ಗೆ 8.30ರಿಂದ ದ್ವಾದಶ ನಾರಿಕೇಳ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಶ್ರೀದೇವರಿಗೆ ಮತ್ತು ಪರಿವಾರ ದೇವರಿಗೆ, ದೈವಗಳಿಗೆ, ನಾಗದೇವರಿಗೆ ಕಲಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕ, ಆಡಳಿತ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here