ಮುರುಳ್ಯ ಯುವತಿ ನಾಪತ್ತೆ : ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ

0

ಕಾಣಿಯೂರು: ಮನೆಮಂದಿ ಮನೆಯಲ್ಲಿಲ್ಲದ ವೇಳೆ ಯುವತಿಯೋರ್ವರು ಮನೆಯಿಂದ ತೆರಳಿ ನಾಪತ್ತೆಯಾಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿಯ ಸುಂದರ ಗೌಡ ಅವರ ಪುತ್ರಿ ಜಯಶ್ರೀ(24) ನಾಪತ್ತೆಯಾದರು. ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ಮದುವೆ ಮಾಡುವ ತಯಾರಿ ಮಾಡಲಾಗಿತ್ತು. ಇತ್ತೀಚೆಗೆ ಮನೆಗೆ ಬಂದಿದ್ದ ಆಕೆ ಫೆ.22ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಿಂದ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here