ನೆಲ್ಯಾಡಿ: ನೆಲ್ಯಾಡಿ ಜೇಸಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಮಕ್ಕಳ ಬಾಲಮೇಳ, ಸ್ತ್ರೀಶಕ್ತಿ ಸಂಘಗಳ ಗೊಂಚಲು ಸಮಿತಿ ಸಭೆ ನಡೆಯಿತು.
![](https://puttur.suddinews.com/wp-content/uploads/2024/02/2-2-1.jpg)
ಈ ಹಿಂದೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾಗಿದ್ದ ಪದ್ಮಪ್ರಸನ್ನ ಅವರನ್ನು ಸನ್ಮಾನಿಸಲಾಯಿತು. ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮಾಶಶಿ, ಸದಸ್ಯ ಅಬ್ದುಲ್ ಜಬ್ಬಾರ್, ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾವತಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸೌಮ್ಯ, ಗೊಂಚಲು ಸಮಿತಿ ಅಧ್ಯಕ್ಷೆ ಗುಲಾಬಿ, ಆಶಾಕಾರ್ಯಕರ್ತೆ ಪೂರ್ಣಿಮಾ, ಸಂಜೀವಿನಿ ಒಕ್ಕೂಟದ ಪ್ರತಿನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶೋಭಸುನಿತ್ ಸ್ವಾಗತಿಸಿದರು. ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪವತಿ ವಂದಿಸಿದರು. ಜೇಸಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ತುಳಸಿ ನಿರೂಪಿಸಿದರು.