ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಜೀಪು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ಫೆ.23ರಂದು ರಾತ್ರಿ ಸಂಭವಿಸಿದೆ.
![](https://puttur.suddinews.com/wp-content/uploads/2024/02/kokkada-1-1.jpg)
ಅರಣ್ಯ ಇಲಾಖೆ ಅಧಿಕಾರಿ ರಾಜೇಶ್ ಜೀಪು ಚಲಾಯಿಸುತ್ತಿದ್ದು ಜೀಪಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು ಅಧಿಕಾರಿಗಳ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.