ನಾಳೆ ಫೆ.27ಕ್ಕೆ ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ರೈತ ಶಕ್ತಿ’ ಉದ್ಘಾಟನೆ

0

ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ರೈತ ಶಕ್ತಿ’ಯು ಸಂಘದ ಆವರಣದಲ್ಲಿ ಫೆ.27ರಂದು ಉದ್ಘಾಟನೆಗೊಳ್ಳಲಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರು ದೀಪೋಜ್ವಲನೆ ಮಾಡಲಿದ್ದು, ದ.ಕ.ಹಾಲು ಒಕ್ಕೂಟದ ವ್ಯವಸ್ಥಾಪಕ ವಿವೇಕ್ ಡಿ. ಅವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಶ್ರೀ.ಕ್ಷೇ.ಧ.ಗ್ರಾ.ಯೋ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಗೋದಾಮು ಉದ್ಘಾಟಿಸಲಿದ್ದಾರೆ. ದ.ಕ.ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ. ರಾಮಕೃಷ್ಣ ಭಟ್, ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ, ದ.ಕ ಹಾಲು ಒಕ್ಕೂಟ ಇದರ ಉಪ ವ್ಯವಸ್ಥಾಪಕ ಡಾ. ಡಿ.ಆರ್ ಸತೀಶ್ ರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಆರ್ಯಾಪು ಗ್ರಾಮದ ಕುಂಜೂರುಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಚಂದ್ರ ಪ್ರಭು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here