ಜಿಡೆಕಲ್ಲು ನೆಕ್ಕರೆ ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ನಿವಾಸಿ ಆಟೋ ರಿಕ್ಷಾ ಚಾಲಕ ಕೃಷ್ಣಪ್ಪ ಪೂಜಾರಿ (58 ವ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.26ರಂದು ಬೆಳಕಿಗೆ ಬಂದಿದೆ.
ಕೃಷ್ಣಪ್ಪ ಪೂಜಾರಿ ಅವರು ಜಿಡೆಕಲ್ಲು ಪಾರ್ಕ್ ನಲ್ಲಿ ಆಟೋ ರಿಕ್ಷಾ ಬಾಡಿಗೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ‌.

LEAVE A REPLY

Please enter your comment!
Please enter your name here