ಶಾಂತಿಗೋಡು ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆ

0

ಪುತ್ತೂರು: ನಮ್ಮ ಶಾಲೆ ನಮ್ಮ ಜವಬ್ದಾರಿ ಎಂಬ ಸರಕಾರದ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸರಕಾರಿ ಶಾಲಾ ಬಲವರ್ಧನೆಗಾಗಿ ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘವನ್ನು ಫೆ.18ರಂದು ರಚಿಸಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ ಆರ್.ರೆಂಜಾಳ, ಉಪಾಧ್ಯಕ್ಷರಾಗಿ ಗಣೇಶ್ ಕೈಂದಾಡಿ, ಮಹಿಳಾ ಉಪಾಧ್ಯಕ್ಷರಾಗಿ ಪ್ರಜ್ಞಾ ಕಕ್ವೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಬಲ್ಯಾಯ ಮುಂಡೋಡಿ, ಜೊತೆ ಕಾರ್ಯದರ್ಶಿಯಾಗಿ ಕರ್ಬಂಡ್ಕ, ಮಹಿಳಾ ಕಾರ್ಯದರ್ಶಿಯಾಗಿ ಶ್ರಾವ್ಯ ಪಾಣಂಬು, ಕೋಶಾಧಿಕಾರಿಯಾಘಿ ಪ್ರವೀಣ್ ಕಕ್ವೆ, ಸಲಹೆಗಾರರಾಗಿ ಮುಖ್ಯಗುರು ಸವಿತಾರವರುಗಳನ್ನು ಆಯ್ಕೆಮಾಡಲಾಯಿತು. ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಶಿಕ್ಷಕ ವೃಂದ ಸೇರಿದಂತೆ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here