ಹಿರೇಬಂಡಾಡಿ ದೇವಸ್ಥಾನದ ವಾರ್ಷಿಕ ಉತ್ಸವ, ದೈವಗಳ ಪುನ: ಪ್ರತಿಷ್ಠೆ, ಬ್ರಹ್ಮಕಲಶ

0

ಹಿರೇಬಂಡಾಡಿ: ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ವಾರ್ಷಿಕ ಉತ್ಸವ ಹಾಗೂ ಶ್ರೀ ದೈವಗಳ ಪುನ: ಪ್ರತಿಷ್ಠೆ,ಬ್ರಹ್ಮಕಲಶ ಫೆ.25 ಮತ್ತು 26ರಂದು ನಡೆಯಿತು.
ಫೆ.25ರಂದು ಬೆಳಿಗ್ಗೆ ಹೊರೆಕಾಣಿಕೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೈವಸ್ಥಾನದಲ್ಲಿ ವಾಸ್ತು ರಕ್ಷೆಘ್ನ ಹೋಮ, ಬಿಂಬಾಧಿವಾಸ, ದಿಕ್ಪಾಲಬಲಿ, ರಾತ್ರಿ ಮಹಾಪೂಜೆ ನಡೆಯಿತು. ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಫೆ.26ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ ನಡೆದು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು. ನಂತರ ಶ್ರೀದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ, ಮಧ್ಯಾಹ್ನ ಧಾರ್ಮಿಕ ಸಭೆ, ಬಳಿಕ ಅನ್ನಸಂತರ್ಪಣೆ ನಡೆಯಿತು.
ದೈವಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಪ್ರಧಾನ ಅರ್ಚಕರೂ ಆದ ಗೋಪಾಲಕೃಷ್ಣ ತೋಳ್ಪಾಡಿತ್ತಾಯ, ವ್ಯವಸ್ಥಾಪಾ ಸಮಿತಿ ಅಧ್ಯಕ್ಷರಾದ ಜನಾರ್ದನ ಗೌಡ ಸಾಂತಿತ್ತಡ್ಡ, ಸದಸ್ಯರಾದ ಗಣೇಶ ಮಠಂದೂರು, ಸದಾಶಿವ ಬಂಗೇರ ಎಲಿಯ, ನಾರಾಯಣ ಕನ್ಯಾನ, ಮುದ್ದ ಕೆಮ್ಮಾರ, ಸತೀಶ ಶೆಟ್ಟಿ ಪಡ್ಯೊಟ್ಟು, ಕಸ್ತೂರಿ ಹೆನ್ನಾಳ, ಭಾರತಿ ನಿಡ್ಡೆಂಕಿ, ಉತ್ಸವ ಸಮಿತಿ ಅಧ್ಯಕ್ಷ ನವೀನ್ ಪಡ್ಪು, ಕಾರ್ಯದರ್ಶಿ ಅಶೋಕ ಹಲಸಿನಕಟ್ಟೆ, ಶ್ರೀ ದೈವಗಳ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ವಿಶ್ವನಾಥ ಕೆಮ್ಮಟೆ, ಕೋಶಾಧಿಕಾರಿ ವಿಠಲ ಪರಕೊಡಂಗೆ, ಬೈಲುವಾರು ಸಂಚಾಲಕರು, ವಿವಿಧ ಸಮಿತಿಯ ಸದಸ್ಯರು, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ, ಗಣೇಶೋತ್ಸವ ಸಮಿತಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here