ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಸಂಪನ್ನ

0

ಪುತ್ತೂರು: ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.24 ಮತ್ತು 25ರಂದು ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಫೆ.24ರಂದು ಬೆಳಿಗ್ಗೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರ ಪ್ರೀತ್ಯರ್ಥವಾಗಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಸಂಗಮ್ ಬ್ರದರ್‍ಸ್ ಪುತ್ತೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ಗಂಟೆಯಿಂದ ಶ್ರೀ ದೇವರ ಉತ್ಸವ, ದರ್ಶನ ಬಲಿ, ಬಟ್ಟಲುಕಾಣಿಕೆ ಅನ್ನಸಂತರ್ಪಣೆ ನಡೆಯಿತು. ಫೆ.25ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಶ್ರೀ ದರ್ಶನ ಪಾತ್ರಿಯವರಿಂದ ಶ್ರೀ ದೇವಿ ದರ್ಶನ ಮತ್ತು ಅಭಯ ನುಡಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರ್ಯೂ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ ದೈವಗಳ ಭಂಡಾರ ಬರುವುದು, ಸಾರ್ವಜನಿಕ ಅನ್ನಸಂತರ್ಪಣೆ ಬಳಿಕ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.

LEAVE A REPLY

Please enter your comment!
Please enter your name here