ಅಯೋಧ್ಯೆ ಶ್ರೀ ರಾಮನ ಮಂಡಲೋತ್ಸವದ ಅಷ್ಟಾವಧಾನದಲ್ಲಿ ವಿದುಷಿ ಶಾಲಿನಿ ಆತ್ಮಭೂಷಣ್ ನೃತ್ಯ ಸೇವೆ

0

ಪುತ್ತೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಡೆಯುತ್ತಿರುವ 48 ದಿನಗಳ ಮಂಡಲ ಉತ್ಸವದ ಅಷ್ಟಾವಧಾನದಲ್ಲಿ ಮಂಗಳವಾರ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಇದರ ನೃತ್ಯಗುರು, ವಿದುಷಿ ಶಾಲಿನಿ ಆತ್ಮಭೂಷಣ್ ಅವರು ನೃತ್ಯಸೇವೆ ಸಮರ್ಪಿಸಿದರು.ತೀರ್ಥಕ್ಷೇತ್ರ ಟ್ರಸ್ಟ್ ನ ಟ್ರಸ್ಟಿ ಆಗಿರುವ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಮಂಡಲ ಉತ್ಸವ ವಿಜೃಂಭಣೆಯಿಂದ ನಡೆಯಿತು.ಶ್ರೀ ಬಾಲರಾಮನ ಪಲ್ಲಕಿ ಉತ್ಸವ, ಚಾಮರಸೇವೆ ಮೊದಲಾದ ಕಾರ್ಯಕ್ರಮಗಳು ನೆರವೇರಿತು.

LEAVE A REPLY

Please enter your comment!
Please enter your name here