ಪಡ್ಡಾಯೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

0

ಅಧ್ಯಕ್ಷ ರಾಮಣ್ಣ ಗೌಡ ಪುಳು, ಉಪಾಧ್ಯಕ್ಷೆ ಹೇಮಲತಾ ಎಸ್.

ಪುತ್ತೂರು: ಪಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಪುಳು ಹಾಗೂ ಉಪಾಧ್ಯಕ್ಷರಾಗಿ ಹೇಮಲತಾ ಎಸ್‌ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 10 ಸ್ಥಾನಗಳನ್ನು ಹೊಂದಿರುವ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹೇಮಲತಾ ಎಸ್, ರಮೇಶ್ ಗೌಡ, ಗಂಗಾಧರ ಗೌಡ, ಪ್ರೇಮ ಕೆ., ಜಾನಕಿ ಕುಂಬಾಡಿ, ಗೋಪಾಲಕೃಷ್ಣ ಕೆ., ರಾಮಣ್ಣ ಗೌಡ ಪುಳು, ಮಹಿಳಾ ಮೀಸಲು ಸ್ಥಾನದಿಂದ ಸುಶೀಲ ಕೂಟೇಲು, ಪ.ಪಂಗಡದಿಂದ ನೀಲಪ್ಪ ನಾಯ್ಕ ಮತ್ತು ಪ.ಜಾತಿ ಸ್ಥಾನದಿಂದ ಭಟ್ಯಪ್ಪರವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ:
ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆಗಳು ಫೆ.12ರಂದು ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ರಾಮಣ್ಣ ಗೌಡ ಪುಳು ಅವರನ್ನು ಗೋಪಾಲಕೃಷ್ಣ ಸೂಚಿಸಿ, ಹೇಮಲತಾ ಅನುಮೋದಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಹೇಮಲತಾರವರನ್ನು ಸುಶೀಲಾ ಸೂಚಿಸಿ, ಪ್ರೇಮ ಅನುಮೋದಿಸಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯದರ್ಶಿ ಹಾಗೂ ಹಾಲು ಪರೀಕ್ಷಕಿ ಸಹಕರಿಸಿದರು.

LEAVE A REPLY

Please enter your comment!
Please enter your name here