ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿಯಾಗಿ ಧರ್ಮೇಂದ್ರ ಕಟ್ಟತ್ತಾರು

0

ಕಾಣಿಯೂರು: ಭಾರತೀಯ ಜನತಾ ಪಾರ್ಟಿಯ ದ. ಕ ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿಯಾಗಿ ಧರ್ಮೇಂದ್ರ ಗೌಡ ಕಟ್ಟತ್ತಾರು ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ರೈತ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗೊಳಿಸಿದ್ದಾರೆ. ಸಹಕಾರ ಭಾರತಿ ಪ್ರಕೋಷ್ಠದ ಸಹ ಸಂಚಾಲಕರಾಗಿರುವ ಧರ್ಮೇಂದ್ರ ಕಟ್ಟತ್ತಾರುರವರು ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here