ಕೆಯ್ಯೂರು: ಶಕ್ತಿವಂದನಾ ಕಾರ್ಯಕ್ರಮ, ಸನ್ಮಾನ

0

ಪುತ್ತೂರು: ದೇಶದ ಪ್ರಧಾನಿ ಮೋದಿ ನೇತೃತ್ವದ ಸರಕಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ನಾರಿ ಶಕ್ತಿ ವಂದನಾ ಅಧಿನಿಯಮ್ 2023 ಈ ನಿಟ್ಟಿನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ ಫೆ.28ರಂದು ಕೆಯ್ಯೂರು ಗ್ರಾಪಂ ಸನಾಂಗಣದಲ್ಲಿ ನಡೆಯಿತು. ಮೋದಿ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಗೂ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ತಾ. ಪಂ ಮಾಜಿ ಸದಸ್ಯ, ಬಿಜೆಪಿ ಎಸ್‌ಟಿ ಮೋರ್ಛಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಹರಿಪ್ರಸಾದ್ ಯಾದವ್,ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಸದಸ್ಯೆ ಮೀನಾಕ್ಷಿ ವಿ.ರೈ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಎಂಬಿಕೆ ಯಶಸ್ವಿ, ಎಲ್‌ಆರ್‌ಪಿ ಶ್ರೀಮತಿ, ಸ್ವಚ್ಛತಾ ಸಿಬ್ಬಂದಿಗಳಾದ ಕಾವ್ಯ, ಜಯಂತಿ ಮತ್ತು ಉಷಾರವರುಗಳನ್ನು ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿ, ಸನ್ಮಾನಿಸಲಾಯಿತು. ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here