ಪೆರಾಬೆ ಮನವಳಿಕೆ ಗುತ್ತಿನಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ದೈವಗಳ ನೇಮೋತ್ಸವ

0

ಆಲಂಕಾರು: ಪೆರಾಬೆ ಗ್ರಾಮದ ಮನವಳಿಕೆ ಗುತ್ತು ಕುಟುಂಬದ ಮನೆಯಲ್ಲಿ ಗಣಹೋಮ, ಶ್ರೀದುರ್ಗಾಪೂಜೆ, ಶ್ರೀಹರಿಸೇವೆ, ನಾಗತಂಬಿಲ ಮತ್ತು ಶ್ರೀ ಧರ್ಮದೈವ ಧೂಮಾವತೀ ಬಾವನ ಮತ್ತು ರಕ್ತೇಶ್ವರೀ ದೈವಗಳ ನೇಮ ಹಾಗೂ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ಪೂಜೆ ಶ್ರೀಬ್ರಹ್ಮ ಬೈದೇರುಗಳ ನೇಮೋತ್ಸವ ಫೆ.24 ರಿಂದ ಫೆ.27ರ ತನಕ ನಡೆಯಿತು.. ಫೆ.24 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ದುರ್ಗಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಫೆ.25ರಂದು ಬೆಳಿಗ್ಗೆ ಶ್ರೀಹರಿ ಸೇವೆ, ನಾಗತಂಬಿಲ ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಸ್ಥಾನದಲ್ಲಿ ಶುದ್ಧಿ ಕಲಶ, ರಾತ್ರಿ ಶ್ರೀಧರ್ಮದೈವ ಧೂಮಾವತೀ ಬಾವನ ರಕ್ತೇಶ್ವರೀ ದೈವಗಳಿಗೆ ಭಂಡಾರ ತೆಗೆದು ಅನ್ನಸಂತರ್ಪಣೆ ಬಳಿಕ ಧರ್ಮದೈವ ಧೂಮವತೀ ಬಾವನ ನೇಮೋತ್ಸವ ನಡೆಯಿತು. ಫೆ.26ರಂದು ಬೆಳಿಗ್ಗೆ ರಕ್ತೇಶ್ವರೀ, ಶಿರಾಡಿ ದೈವಗಳ ನೇಮ, ಸಂಜೆ ಪಂಜುರ್ಲಿ ಕಲ್ಲುರ್ಟಿ ನೇಮ, ಸತ್ಯದೇವತೆ ನೇಮೋತ್ಸವ, ಅನ್ನಸಂತರ್ಪಣೆ ನಡೆಯಿತು. ಫೆ.27ರಂದು ಬೆಳಿಗ್ಗೆ ದೈಯ್ಯೊಂಕುಳು, ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಇತರ ದೈವಗಳ ನೇಮ, ಸಂಜೆ ಶ್ರೀಬೈದೇರುಗಳ ಭಂಡಾರ ತೆಗೆದು ರಾತ್ರಿ ಶ್ರೀನಾಗಬ್ರಹ್ಮ ಸನ್ನಿಧಿಯಲ್ಲಿ ಪೂಜೆ ಅನ್ನಸಂತರ್ಪಣೆ, ಬಳಿಕ ಶ್ರೀಬೈದೇರುಗಳ ನೇಮೋತ್ಸವ ನಡೆಯಿತು.ಕಾರ್ಯಕ್ರಮಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ,ಬಂಟರಯಾನೆ ನಾಡವರ ಮಾತೃಸಂಘ ಮಂಗಳೂರಿನ ಉಪಾಧ್ಯಕ್ಷರಾದ ಕಾವು ಹೇಮಾನಾಥ ಶೆಟ್ಟಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು,ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ,ಸುಳ್ಯಮಂಡಲ ಬಿ.ಜೆ.ಪಿ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಹಲವು ಮಂದಿಗಣ್ಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು
ಅಗಮಿಸಿ ದೈವ ದೇವರ ಪ್ರಸಾದ ಸ್ವೀಕರಿಸಿ ಅನ್ನಸಂತರ್ಪಣೆ ಯಲ್ಲಿ ಪಾಲ್ಗೊಂಡರು. ಸಂಧರ್ಭದಲ್ಲಿ ಮನವಳಿಕೆ ಗುತ್ತಿನ ಯಾಜಮಾನ ರಮಾನಾಥ ರೈ, ದೈವ ದೇವರುಗಳ ಟ್ರಸ್ಟ್‌ನ ಅಧ್ಯಕ್ಷ ಹಾಗು ವ್ಯವಸ್ಥಾಪಕ ದಯಾನಂದ ರೈ, ಕಾರ್ಯದರ್ಶಿ ಪ್ರಶಾಂತ ರೈ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಠಲ ರೈ, ಕಾರ್ಯದರ್ಶಿ ಸುಭಾನು ರೈ, ವ್ಯವಸ್ಥಾಪಕ ಗೋಪಾಲಕೃಷ್ಣ ರೈ, ಗಣೇಶ ರೈ,ದೈವದ ಮದ್ಯಸ್ಥರಾದ ರಾಧಾಕೃಷ್ಣ ರೈ ಮನವಳಿಕೆ ಸೇರಿದಂತೆ ಮನವಳಿಕೆ ಗುತ್ತಿನ ಕುಟುಂಬಸ್ಥರು ಹಾಗು ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here