ಇರ್ದೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ವಿಷ್ಣುಮೂರ್ತಿ ದೇವಾಲಯ  ಗೋಪಾಲಕ್ಷೇತ್ರ ಇರ್ದೆ, ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ ಅಜ್ಜಿಕಲ್ಲು, ರೆಂಜ, ಅಜಲಡ್ಕ, ಕಕ್ಕೂರು, ಚೂರಿಪದವು ಇವುಗಳ ಆಶ್ರಯದಲ್ಲಿ ಇರ್ದೆ ದೇವಾಲಯದಲ್ಲಿ ಏ.6ರಂದು ನಡೆಯುವ 20ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫೆ.29ರಂದು ಉಪ್ಪಳಿಗೆ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಪೂಜಾ ಸಮಿತಿ ಅಧ್ಯಕ್ಷ ಪುರಂದರ ಗೌಡ, ಗೌರವಾಧ್ಯಕ್ಷ ಪ್ರಕಾಶ್ ರೈ ಬೈಲಾಡಿ, ಯೋಜನೆಯ ಬೆಟ್ಟಂಪಾಡಿ, ವಲಯ ಮೇಲ್ವಿಚಾರಕ ಚಂದ್ರಶೇಖರ, ಒಕ್ಕೂಟದ ವಲಯ ಅಧ್ಯಕ್ಷ ಬಾಲಕೃಷ್ಣ, ಪೂಜಾ ಸಮಿತಿ ಕಾರ್ಯದರ್ಶಿ ಮೋಹನ್ ಚಂದ್ರ, ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಗೂ ಪೂಜಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here