ಕಲ್ಬುರ್ಗಿ ಪ್ರವೇಶಕ್ಕೆ ಸೂಲಿಬೆಲೆಗೆ ಹೈಕೋರ್ಟ್ ಅನುಮತಿ-ಸೂಲಿಬೆಲೆ ಪರ ಅರುಣ್‌ಶ್ಯಾಂ ಪುತ್ತೂರು ವಾದ

0

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುತ್ತಿರುವ ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ತೆರವುಗೊಳಿಸಿದೆ.

ಸೂಲಿಬೆಲೆ ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಕಲಬುರಗಿಯತ್ತ ಬರುತ್ತಿದ್ದರು.ಅವರಿಗೆ ಜಿಲ್ಲೆಯ ಗಡಿ ಪ್ರವೇಶಿಸದಂತೆ ಪೊಲೀಸರು ಕಮಲಾಪುರ ಬಳಿ ತಡೆಯೊಡ್ಡಿದರು.ತಡರಾತ್ರಿ ಕಲಬುರಗಿ ಉಪವಿಭಾಗಾಧಿಕಾರಿ ರೂಪಿಂದರ್ ಕೌರ್ ಅವರು ಸೂಲಿಬೆಲೆ ಜಿಲ್ಲೆ ಪ್ರವೇಶಕ್ಕೆ ನಿಷೇಧ ವಿಧಿಸಿ ಆದೇಶ ಹೊರಡಿಸಿದ್ದರು.ಅಲ್ಲದೇ, ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಷಾಷಾವಲಿ ಅನುಮತಿ ನೀಡಿರಲಿಲ್ಲ.ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ನ್ಯಾಯಪೀಠವು, ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲು ಷರತ್ತು ಬದ್ಧ ಅನುಮತಿ ನೀಡಿದೆ.ಚಕ್ರವರ್ತಿ ಸೂಲಿಬೆಲೆ ಪರವಾಗಿ ಹೈಕೋರ್ಟ್ ವಕೀಲ ಅರುಣ್‌ಶ್ಯಾಂ ಪುತ್ತೂರು ವಾದಿಸಿದ್ದರು.ವಕೀಲ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.

LEAVE A REPLY

Please enter your comment!
Please enter your name here