ಸರಕಾರದ ರಿಯಾಯಿತಿ ದರದ ಸಾಲಗಳು ದ ಕ ಉಡುಪಿಯಲ್ಲಿ ಅನುಷ್ಠಾನವಾಗಿಲ್ಲ-ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲ ಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

0

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿತ್ತು, ಶೇ. 3 ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುಷ್ಠಾನವಾಗಿಲ್ಲ ಇದುವರೆಗೂ ಯಾವುದೇ ಕೃಷಿಕರಿಗೆ ಯೋಜನೆಯ ತಲುಪಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದರು.


ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಸರಕಾರ ಕೃಷಿಕರ ಅಥವಾ ರೈತರಿಗೆ ನೆರವಾಗಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಯಾವುದೇ ಸರಕಾರ ನೀಡಿದ ಸೌಲಭ್ಯವನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಆದರೆ ಈ ಯೋಜನೆಯಿಂದ ಕರಾವಳಿ ಜಿಲ್ಲೆಯ ಕೃಷಿಕರು ವಂಚಿತರಾಗಿದ್ದಾರೆ. ಉಭಯ ಜಿಲ್ಲೆಗಳ ಯಾವುದೇ ಸಹಕಾರಿ ಸಂಘಗಳಲ್ಲಿ ಈ ಸಾಲವನ್ನು ಕೃಷುಕರಿಗೆ ನೀಡುತ್ತಿಲ್ಲ ಎಂದು ಸರಕಾರದ ಗಮನಕ್ಕೆ ತಂದರು. ಈಗಾಗಲೇ 6715 ಅರ್ಜಿಗಳು ಬಂದಿದ್ದು ಈ ಪೈಕಿ 6354 ಅರ್ಜಿದಾರರಿಗೆ ಸಾಲವನ್ನು ನೀಡಲಾಗಿದೆ. ದಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರು ಮಾತ್ರ ಈ ಸಾಲದಿಂದ ವಂಚಿತರಾಗಿದ್ದಾರೆ. ಯಾವ ಕಾರಣಕ್ಕೆ ಸಹಕಾರಿ ಸಂಘಗಳಲ್ಲಿ ಸಾಲವನ್ನು ನೀಡುತ್ತಿಲ್ಲ ಎಂದು ಅಧಿವೇಶನದಲ್ಲಿ ಪ್ರಶ್ನಿಸಿದ ಶಾಸಕರು ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದ ಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರಿಗೆ ಸರಕಾರದ ಕೃಷಿ ಸಾಲ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಶಾಸಕರ ಮನವಿಗೆ ಸ್ಪೀಕರ್ ಯು ಟಿ ಖಾದರ್ ದ್ವನಿಗೂಡಿಸಿದರು.

ಲೋಪವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಚಿವರ ಸ್ಪಷ್ಟನೆ
ಸರಕಾರ ಜಾರಿಗೆ ತಂದಿರುವ ಶೂನ್ಯ ಬಡ್ಡಿದರದಲ್ಲಿ ದೊರೆಯುವ ಅಲ್ಪಾವಧಿ ಸಾಲ ಮತ್ತು ಶೇ. 3 ಬಡ್ಡಿದರದಲ್ಲಿ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿತ್ತು. ಅರ್ಹ ಕೃಷಿಕರಿಗೆ ಈ ಸಾಲವನ್ನು ನೀಡಲಾಗಿದೆ. ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವಿಳಂಬವಾಗಿರುವ ಬಗ್ಗೆ ಶಾಸಕರು ಗಮನ ಸೆಳೆದಿದ್ದಾರೆ. ಯಾವ ಕಾರಣಕ್ಕೆ ಹೀಗಾಯ್ತು ಎಂಬುದನ್ನು ಪರಿಶೀಲಿಸುತ್ತೇನೆ. ಅರ್ಹ ಫಲಾನುಭವಿಗಳನ್ನು ಹುಡುಕಿ ಅಂಥವರಿಗೆ ಸಾಲವನ್ನು ಕೊಡುವ ಕೆಲಸವನ್ನು ಮಾಡುವುದಾಗಿ ಸಚಿವ ಪ್ರಿಯಾಂಗ ಖರ್ಗೆ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here