ಗೋಳಿತ್ತೊಟ್ಟು: ಜನಜಾಗೃತಿ ವೇದಿಕೆ ವತಿಯಿಂದ ಆರ್ಥಿಕ ನೆರವು

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇದರ ಜನಜಾಗೃತಿ ವೇದಿಕೆ ಗೋಳಿತ್ತೊಟ್ಟು ವಲಯ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆಯವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಇವರ ಚಿಕಿತ್ಸೆಗೆ ಜನಜಾಗೃತಿ ವೇದಿಕೆ ವತಿಯಿಂದ ಮಂಜೂರಾದ 10 ಸಾವಿರ ರೂ. ಮಂಜೂರಾತಿ ಪತ್ರವನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಸವಣೂರು ಅವರು ಹಸ್ತಾಂತರ ಮಾಡಿದರು.


ಈ ಸಂದರ್ಭದಲ್ಲಿ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಗೋಳಿತ್ತೊಟ್ಟು ವಲಯ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ವಲಯ ಮೇಲ್ವಿಚಾರಕರಾದ ಸುಜಾತ ಬಿ, ಸೇವಾ ಪ್ರತಿನಿಧಿ ವಿಶಾಲಾಕ್ಷಿ, ನೇಮಿರಾಜ್ ಕಲಾಯಿ ಹಾಗೂ ಅಂಬರ್ಜೆ ಪ್ರಗತಿ ಬಂದು ತಂಡದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here